ನಮ್ಮನ್ನು ಅನುಸರಿಸಿ: Facebook Twitter Instagram YouTube

ಮಹಾಕಾಲ ‘ಸ್ಥಿತಿ’ ಭಾಗ-೨

ಅಪ್‌ಲೋಡ್ ಮಾಡಿದ ದಿನಾಂಕ: 31-07-2026 10:28

ಮಹಾಕಾಲ ‘ಸ್ಥಿತಿ’ ಭಾಗ-೨

ಲೇಖಕರು: ಜಿ ಬಿ ಹರೀಶ

ಪ್ರಕಾಶಕರು: ಅಯೋಧ್ಯಾ ಪಬ್ಲಿಕೇಶನ್ಸ್

ಬೆಲೆ: ₹399.00

ನೇತಾಜಿ ಬಾಲ್ಯದಲ್ಲಿ ಹೇಗಿದ್ದರು? ಅವರ ವ್ಯಕ್ತಿತ್ವಕ್ಕೆ ಶಿವಾಜಿಯ ಸ್ಪೂರ್ತಿ ಮೆರುಗು ಕೊಟ್ಟದ್ದು ಹೇಗೆ? ಪ್ರತಿಷ್ಠಿತ ಬಂಗಾಳಿ ಕುಟುಂಬದಲ್ಲಿ ಜನಿಸಿದ, ಸದಾ ಶ್ರೀಮಂತಿಕೆಯಲ್ಲೇ ತೇಲಾಡಬಹುದಾಗಿದ್ದ ಯುವಕ ಸುಭಾಷ್ ಯಾಕೆ ಐಸಿಎಸ್ ಪರೀಕ್ಷೆ ಬರೆದರು? ಬರೆದು ತೇರ್ಗಡೆಯಾದ ಮೇಲೂ ಸಹ ಯಾಕೆ ಆ ಕೆಲಸಕ್ಕೆ ರಾಜೀನಾಮೆ ಕೊಟ್ಟರು? ಗಾಂಧೀಜಿಗೂ ಅವರಿಗೂ ಯಾವ ಕಾರಣಕ್ಕೆ ಭಿನ್ನಾಭಿಪ್ರಾಯ ಬಂತು? ನೆಹರು ಮತ್ತು ಗಾಂಧೀಜಿಯ ಪರಿವಾರ ಕಾಂಗ್ರೆಸ್ಸಿನ ಒಳಗೆ ನೇತಾಜಿಯವರ ವಿರುದ್ಧ ಏನೇನು ಪಿತೂರಿಗಳನ್ನು ಮಾಡಿತು? ಈ ಎಲ್ಲ ಘಟನಾವಳಿಗಳ ಸುತ್ತ ತಿರುಗುತ್ತದೆ ‘ಮಹಾಕಾಲ'ದ ಎರಡನೇ ಭಾಗ 'ಸ್ಥಿತಿ'.
ಇದರಲ್ಲಿ ಕಾರ್ಯಕಾರಣ ಸಂಬAಧಗಳ ಅನ್ವೇಷಣೆ ಇದೆ, ಜೊತೆಗೆ ಯಾವ ತರ್ಕಕ್ಕೂ ಸಿಕ್ಕದ ಮನುಷ್ಯರ ಆಕಾಂಕ್ಷೆ-ದುಗುಡ-ಅಸ್ಥಿರತೆಗಳ ಶೋಧನೆಯು ಘಟನೆಗಳ ಒಳಗೆ ಬೆರೆತು ಹೋಗಿದೆ. ಮೊದಲ ಬಾರಿಗೆ ಮಾನವೀಯ ನೆಲೆಯಲ್ಲಿ ನಮ್ಮ ಇತಿಹಾಸದ ಪೂರ್ವಜರನ್ನು ನಮ್ಮ ಕಾಲಕ್ಕೆ ಬರಮಾಡಿಕೊಳ್ಳುವ ಪ್ರಯತ್ನ ಇದು. ಇಲ್ಲಿ ಕಥನವು ಉಯ್ಯಾಲೆಯಂತೆ ‘ಸೃಷ್ಟಿ'ಯಿಂದ ಹಿಂದಕ್ಕೆ ಜೀಕಿಕೊಂಡು ‘ಸ್ಥಿತಿ'ಯನ್ನು ಕಥನದ ಹಂದರದಲ್ಲಿ ಹಿಡಿಯಲು ಹವಣಿಸಿದೆ. ತ್ರಿವಳಿ ಕಾದಂಬರಿಯ ಮೊದಲ ಭಾಗ ಭಾರೀ ಜನಪ್ರಿಯತೆಯನ್ನು ಗಳಿಸಿದ ನಂತರ, ಇದೀಗ ಅದರ ಎರಡನೆ ಭಾಗ ಪ್ರಕಟವಾಗಿದೆ.

ಸಂಪರ್ಕಿಸಿ: ೭೭೯೫೮೨೭೩೦೭, ೬೩೬೦೫೮೧೯೫೭ 

⬅ ಮುಖಪುಟ